ಈ ವಿಶೇಷ ರೈಲು ಪ್ಯಾಕೇಜ್, ಪೌರಾಣಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ ಸ್ಥಳಗಳನ್ನು ಒಳಗೊಂಡಿದೆ. ಎಸ್ಎಂವಿಟಿ ಬೆಂಗಳೂರು, ತುಮಕೂರು, ಬೀರೂರು, ದಾವಣಗೆರೆಮ, ಹಾವೇರಿ, ಹುಬ್ಬಳ್ಳಿ ಮತ್ತು ಬೆಳಗಾವಿ ನಿಲ್ದಾಣದಿಂದ ಈ ರೈಲನ್ನು ಹತ್ತಬಹುದಾಗಿದೆ. ಕರ್ನಾಟಕದ ನಿವಾಸಿ ಪ್ರಯಾಣಿಕರಿಗೆ ರಾಜ್ಯ ಸರ್ಕಾರ 5 ಸಾವಿರ ರೂಪಾಯಿ ಸಹಾಯಧನವನ್ನು ಸಹ ನೀಡುತ್ತದೆ.