ಯಡಿಯೂರಪ್ಪ ಅವರು ನನ್ನ ಮೊದಲ ಶತ್ರು. ಆದ್ರೆ ಅವರಿಲ್ಲಾಂದ್ರೆ ರಾಜ್ಯದಲ್ಲಿ ಬಿಜೆಪಿ ಇರಲ್ಲ ಎಂದು ಕನ್ನಡ ಚಳುವಳಿ ನಾಯಕ ವಾಟಾಳ್ನಾಗರಾಜ್ ಹೇಳಿದ್ದಾರೆ. ಆದರೂ ನಾನು ಬಿಎಸ್ವೈ ಪರವಿಲ್ಲ ಎಂದಿದ್ದಾರೆ.
ಕೇರಳ- ಬಂಡೀಪುರ ರಾತ್ರಿ ಸಂಚಾರ ನಿಷೇಧ ರದ್ದುಪಡಿಸಲು ಕೇರಳಿಗರು ವೈನಾಡ್ ಜಿಲ್ಲೆಯಲ್ಲಿ ನಡೆಸುತ್ತಿರುವ ಹೋರಾಟ ನಿಲ್ಲಿಸದಿದ್ದರೆ ಹಗಲು ಹೊತ್ತು ಹೆದ್ದಾರಿ ಮುಚ್ಚುತ್ತೇವೆ ಎಂದು ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜು ಎಚ್ಚರಿಕೆ ನೀಡಿದ್ದಾರೆ. ಕೇರಳ ರಸ್ತೆಯ ಮದ್ದೂರು ಚೆಕ್ಪೋಸ್ಟ್ ಬಳಿ ಹೆದ್ದಾರಿಯಲ್ಲಿ ವಾಟಾಳ್ ನಾಗರಾಜ್ ಮಲಗಿ ಪ್ರತಿಭಟನೆ ಆರಂಭಿಸಿ ಕೇರಳ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ನಿಮ್ಮ ಅಗತ್ಯ ಇಲ್ಲ, ರಾಜೀನಾಮೆ ಕೊಟ್ಟು ಹೋಗ್ಬಿಡಿ: ಖಾಸಗಿ ಪ್ರಾಕ್ಟಿಸ್ ಮಾಡುವ ಸರ್ಕಾರಿ ವೈದ್ಯರಿಗೆ ‘ರಾಮಬಾಣ’ | ಆಸ್ಪತ್ರೆ ವಾಸ್ತವ್ಯ ಆರಂಭಿಸಿದ ಆರೋಗ್ಯ ಸಚಿವ ಶ್ರೀರಾಮುಲುರಿಂದ ವೈದ್ಯರಿಗೆ ‘ಇಂಜೆಕ್ಷನ್’
ಆರೋಗ್ಯ ಸಚಿವ ಬಿ. ಶ್ರೀರಾಮುಲು ಆಸ್ಪತ್ರೆ ವಾಸ್ತವ್ಯವನ್ನು ಆರಂಭಿಸಿದ್ದಾರೆ. ಜಿಲ್ಲಾಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಪ್ರಾತ್ಯಕ್ಷಿಕೆ ( ಡೆಮಾಸ್ಟ್ರೇಷನ್) ಕೊಠಡಿಯಲ್ಲಿ ರಾತ್ರಿ 9 ಗಂಟೆಗೆ ಮಲಗುವ ಮೂಲಕ ಆಸ್ಪತ್ರೆ ವಾಸ್ತವ್ಯಕ್ಕೆ ಚಾಲನೆ ನೀಡಿದ್ದಾರೆ. ರಾತ್ರಿ 8.25ರ ವೇಳೆಗೆ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾಸ್ಪತ್ರೆಗೆ ಆಗಮಿಸಿದ ಅವರು ವಾರ್ಡ್ಗಳಿಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ಸೇವೆ ವಿಚಾರಿಸಿದ್ದಾರೆ.
ಡಾ.ರಾಜ್ ಕುಮಾರ್, ಪಾರ್ವತಮ್ಮ ರಾಜಕುಮಾರ್ ಹಾಗೂ ಕುಟುಂಬದ ಎಲ್ಲ ಸದಸ್ಯರು ದೀಕ್ಷೆ ಪಡೆದು ಪೂಜೆ ಸಲ್ಲಿಸುತ್ತಿದ್ದ ಮಠಕ್ಕೆ ಸೇರಿದ ಜಾಗವನ್ನು ಒತ್ತುವರಿ ಮಾಡಿಕೊಂಡು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಡಾ.ರಾಜ್ ಸಹೋದರಿ ನಾಗಮ್ಮ ಅವರು ಆರೋಪಿಸಿದ್ದಾರೆ.
ಇದು ಅಚ್ಚರಿಯಾದ್ರೂ ಸತ್ಯ. ಬಂಡಿಪುರದ ಹುಲಿ ಸಂರಕ್ಷಿತಾರಣ್ಯದಲ್ಲಿರುವ ಹುಲಿಯಮ್ಮನ ದೇವಸ್ಥಾನಕ್ಕೆ ತೆರಳಿ ನೀವು ಪೂಜೆ ಸಲ್ಲಿಸಬೇಕು ಎಂದರೆ ನೀವು ಆಧಾರ್ ಕಡ್ಡಾಯವಾಗಿ ತೋರಿಸಲೇಬೇಕು.
ಸೇನಾ ನೇಮಕಾತಿಗಾಗಿ ಉಚಿತ ತರಬೇತಿ| ಮಡಿಕೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅ.13 ರಿಂದ 18 ರವರೆಗೆ ಭಾರತೀಯ ಸೇನಾ ಭರ್ತಿ ರ್ಯಾಲಿ| ಉಚಿತವಾಗಿ ಪೂರ್ವಭಾವಿ ತರಬೇತಿ| ಆಸಕ್ತಿಯುಳ್ಳ ಅಭ್ಯರ್ಥಿಗಳು ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳಬಹುದು|
ಕೇಂದ್ರದ ವಿರುದ್ಧ ಕರ್ನಾಟಕ ಸೇನಾಪಡೆ ಆಕ್ರೋಶ| ಕೇಂದ್ರದ ನಡೆ ಖಂಡಿಸಿ ಕರ್ನಾಟಕ ಸೇನಾಪಡೆಯ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ| ಉಳಿಸಿ ಉಳಿಸಿ ಕನ್ನಡ ಉಳಿಸಿ, ಬೇಡ ಬೇಡ ಹಿಂದಿ ಬೇಡ, ಬೇಕೇ ಬೇಕು ಕನ್ನಡ ಬೇಕು ಎಂಬಿತ್ಯಾದಿ ಘೋಷಣೆ|
ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಕಾಂಗ್ರೆಸ್ ಮುಖಂಡನ ಆಯ್ಕೆ ಬಹುತೇಕ ಖಚಿತವಾದಂತಾಗಿದೆ.
ರಾಷ್ಟ್ರೀಯ ವರಿಷ್ಠೆ ಮಾಯಾವತಿ ಆದೇಶ ಪಾಲನೆ ಮಾಡದೇ ಇರುವ ಶಾಸಕ ಎನ್. ಮಹೇಶ್ ಸಂತನ ರೀತಿ ಮಾತಾಡುವುದನ್ನು ನಿಲ್ಲಿಸಿ ವಾಸ್ತವವಾಗಿರಲಿ ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಹೇಳಿದರು.