ಉಪಕಾರ ಕಾಲೋನಿಯಿಂದ ಗುಂಡ್ಲುಪೇಟೆಗೆ ಬಸ್ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದೆ. ದುರ್ಘಟನೆಯಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಷಾತ್ ಎಲ್ಲರ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಜಿ ಸಂಸದ ಪ್ರತಾಪ ಸಿಂಹ ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಜನರನ್ನು ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಕೂಡಲೇ ಪ್ರತಾಪ ಸಿಂಹರನ್ನ ಬಂಧಿಸುವಂತೆ ಚಾಮರಾಜನಗರ ದಲಿತ ಸಂಘರ್ಷ ಸಮಿತಿ ಮುಖಂಡರು ಒತ್ತಾಯಿಸಿದ್ದಾರೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಟ್ರೆ ನಾಳೆಯಿಂದಲೇ (ಇಂದು) ಮ್ಯೂಸಿಕಲ್ ಚೇರ್ ಆರಂಭವಾಗಲಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಚಾಮರಾಜನಗರ ತಾಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಗಡಿಯಿಂದ 16 ಕಿಲೋಮೀಟರ್ ದೂರದಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ.
ಅವ್ರೆಲ್ಲಾ ಒಂದು ಕಾಲದಲ್ಲಿ ಕಾಡಲ್ಲೆ ಹುಟ್ಟಿ ಕಾಡಲ್ಲೆ ಬೆಳೆದು ಕಾಡಲ್ಲಿ ಮಣ್ಣಾಗುತ್ತಿದ್ದ ಸೋಲಿಗರು.. ಆದ್ರೆ ಕಾಲ ಚಕ್ರ ಉರುಳಿದಂತೆ. ಕಾಡನ್ನ ಬಿಟ್ಟು ನಾಡಿಗೆ ಬಂದ ಜನಾಂಗಕ್ಕೆ ಸರ್ಕಾರದಿಂದ ಸಕಲ ಸೌಲತ್ತು ನೀಡಲಾಯ್ತು.
ಗಡಿನಾಡು ಚಾಮರಾಜನಗರದಲ್ಲಿ ಮಾನವ ಕಾಡು ಪ್ರಾಣಿ ಸಂಘರ್ಷ ದಿನ ಕಳೆದಂತೆ ಮಿತಿ ಮೀರುತ್ತಿದೆ. ಚಿರತೆಯ ಹಾವಳಿಗೆ ಬ್ರೇಕ್ ಹಾಕಲು ಬಂದ ಅರಣ್ಯ ಇಲಾಖೆಯ ಸಿಬ್ಬಂದಿಯೇ ಈಗ ರೈತರ ಪಾಲಿಗೆ ವಿಲನ್ ಆಗಿದ್ದಾರೆ.
ಚಿಕ್ಕಪ್ಪನ ಕ್ರಷರ್ಗಾಗಿ ಅಧಿಕಾರ ದುರ್ಬಳಕೆ ಮಾಡಿಕೊಂಡು ದಲಿತರ ಜಮೀನುಗಳ ಮೇಲೆ ರಸ್ತೆ ನಿರ್ಮಾಣ ಮಾಡಲು ಗುಂಡ್ಲುಪೇಟೆ ಕಾಂಗ್ರೆಸ್ ಶಾಸಕ ಎಚ್.ಎಸ್ ಗಣೇಶ್ ಮುಂದಾಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಟಿಪ್ಪರ್ ಲಾರಿ ಹರಿದು ಕೇರಳದ ವಯನಾಡಿನ ಮೂವರು ದುರ್ಮರಣ ಹೊಂದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ನಡೆದಿದೆ.
ರಾಹುಲ್ ಗಾಂಧಿ ಅವರದ್ದು ಮಾನವ ಜಾತಿ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು. ಚಾಮರಾಜನಗರದ ಮೂಗೂರು ಕ್ರಾಸ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಜಾತಿ ಬಗ್ಗೆ ಟೀಕಿಸಿದ್ದ ಬಸನಗೌಡ ಯತ್ನಾಳ್ ಮಾತಿಗೆ ಕಿಡಿಕಾರಿದರು.
ಸರ್ಕಾರಿ ಉಪವಿಭಾಗೀಯ ಆಸ್ಪತ್ರೆ ದೇಶದಲ್ಲೆ 67ನೇ ಸ್ಥಾನದಲ್ಲಿದ್ದು, ರಾಜ್ಯದಲ್ಲಿ 7ನೇ ಸ್ಥಾನಕ್ಕೆ ಭಾಜನವಾಗಿರುವುದು ಸಂತಸದ ವಿಚಾರ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಚಿದಂಬರ ಹೇಳಿದರು.