Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಮತ್ತೆ ಪಾಕಿಸ್ತಾನಕ್ಕೆ ಅನುಕೂಲವಾಗುವಂತೆ ಹೇಳಿಕೆ ನೀಡಿದ ಮೆಹಬೂಬಾ ಮುಫ್ತಿ

ಮತ್ತೆ ಪಾಕಿಸ್ತಾನಕ್ಕೆ ಅನುಕೂಲವಾಗುವಂತೆ ಹೇಳಿಕೆ ನೀಡಿದ ಮೆಹಬೂಬಾ ಮುಫ್ತಿ

Indus Waters Treaty: ಪಾಕಿಸ್ತಾನದೊಂದಿಗಿನ ಸಿಂಧು ಜಲ ಒಪ್ಪಂದ ತಡೆಹಿಡಿದ ನಂತರ, ಭಾರತವು ನೀರನ್ನು ಬಳಸಿಕೊಳ್ಳುವ ಬಗ್ಗೆ ಒಮರ್ ಅಬ್ದುಲ್ಲಾ ಅವರ ಪ್ರಸ್ತಾವನೆಯನ್ನು ಮೆಹಬೂಬಾ ಮುಫ್ತಿ ವಿರೋಧಿಸಿದ್ದಾರೆ. ಇದು ಪಾಕಿಸ್ತಾನ ಪರ ಹೇಳಿಕೆ ಎಂದು ಒಮರ್ ಟೀಕಿಸಿದ್ದಾರೆ. ಮುಫ್ತಿಯವರು ಮಾತುಕತೆಗೆ ಒತ್ತು ನೀಡಿದ್ದಾರೆ.

Kannadaprabha News | Published : May 17 2025, 08:23 AM
2 Min read
Share this Photo Gallery
  • FB
  • TW
  • Linkdin
  • Whatsapp
  • Google NewsFollow Us
15
Asianet Image

ನವದೆಹಲಿ: ಪಾಕಿಸ್ತಾನದೊಂದಿಗಿನ ಸಿಂಧು ಜಲ ಒಪ್ಪಂದ ತಡೆಹಿಡಿದ ಬೆನ್ನಲ್ಲೇ, ಆ ನೀರನ್ನು ಭಾರತ ಬಳಸಿಕೊಳ್ಳುವ ಜಮ್ಮು ಕಾಶ್ಮೀರ ಸಿಎಂ ಒಮ‌ರ್ ಅಬ್ದುಲ್ಲಾ ಅವರ ಪ್ರಸ್ತಾವನೆಯನ್ನು ವಿರೋಧಿಸಿರುವ ಪಿಡಿಪಿ ಮುಖ್ಯಸ್ಥೆ ಮಾಜಿ ಸಿಎಂ ಮೆಹಬೂಬಾ ಮುಫ್ರಿ ಪಾಕಿಸ್ತಾನ ಪರ ವಾಗಿ ಮಾತನಾಡಿದ್ದಾರೆ. ಇದು, ಒಮರ್-ಮುಫ್ರಿ ನಡುವೆ ಟ್ವಿಟ್ ಸಮರಕ್ಕೆ ನಾಂದಿ ಹಾಡಿದೆ. 

25
Asianet Image

'ಪಾಕಿಸ್ತಾನದೊಂದಿಗೆ ಸಿಂಧು ನೀರನ್ನು ಹಂಚಿಕೊಳ್ಳುವ ಒಪ್ಪಂದ ಸ್ಥಗಿತವಾಗಿರುವ ಕಾರಣ, 1987 ಶುರುವಾಗಿ 2007ರಲ್ಲಿ ಪಾಕ್ ನಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದ್ದ ತುಬುಲ್ ಯೋಜನೆಗೆ ಮರುಜೀವ ತುಂಬಬೇಕು' ಎಂದು ಒಮರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಈ ಯೋಜನೆಯಡಿ, ಜಮ್ಮುವಿನ ಬಂಡೀಪೊರಾ ಜಿಲ್ಲೆಯ ವುಲಾರ್ ಕೆರೆಗೆ ಝೇಲಂ ನದಿಯ ನೀರು ಹರಿಬಿಟ್ಟರೆ, ಅದರಿಂದ ಸಂಚಾರ ಹಾಗೂ ವಿದ್ಯುತ್ ಉತ್ಪಾದನೆಗೆ ಸಹಾಯವಾಗುತ್ತದೆ ಎಂಬುದು ಅವರ ಇಂಗಿತವಾಗಿತ್ತು. 

Related Articles

ಯುದ್ಧ ಬೇಡ, ಶಾಂತಿ ಬೇಕು: ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸಲಹೆ
ಯುದ್ಧ ಬೇಡ, ಶಾಂತಿ ಬೇಕು: ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸಲಹೆ
ಸಂಘರ್ಷ ತಿಳಿಗೊಳಿಸಲು ಭಾರತವೇ ಮೊದಲ ಹೆಜ್ಜೆ ಇಡಬೇಕು: ಮೆಹಬೂಬಾ ಮಫ್ತಿ
ಸಂಘರ್ಷ ತಿಳಿಗೊಳಿಸಲು ಭಾರತವೇ ಮೊದಲ ಹೆಜ್ಜೆ ಇಡಬೇಕು: ಮೆಹಬೂಬಾ ಮಫ್ತಿ
35
Asianet Image

ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಮುಪ್ತಿ, 'ಒಮರ್ ಅವರ ಪ್ರಸ್ತಾವನೆ ದುರದೃಷ್ಟಕರ. ಭಾರತ-ಪಾಕ್ ಯುದ್ದದಿಂದ ಈಗಷ್ಟೇ ಹಿಂದೆ ಸರಿದಿವೆ. ಹೀಗಿರುವಾಗ ಇಂತಹ ಹೇಳಿಕೆ ಕೊಡುವುದು ಬೇಜವಾಬ್ದಾರಿಯುತ, ಅಪಾಯಕಾರಿನಡೆ. ನೀರನ್ನು ಶಸ್ತ್ರದಂತೆ ಬಳಸುವುದು ಅಮಾನವೀಯ 2 ದೇಶಗಳ ನಡುವಿನ ವಿಷಯವಾಗಿ ಉಳಿಯಬೇಕಾದದ್ದನ್ನು ಅಂತಾ ರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಅಪಾಯವೂ ಇದೆ' ಎಂದು ಪಾಕ್‌ಗೆ ಅನುಕೂಲವಾಗುವ ಹೇಳಿಕೆ ನೀಡಿದ್ದಾರೆ. ಇದನ್ನು ಅಬ್ದುಲ್ಲಾ, 'ಗಡಿಯಾಚೆ ಇರುವ ಕೆಲವರನ್ನು ಪ್ರಸನ್ನಪಡಿಸುವ ಹೇಳಿಕೆ' ಎಂದು ಟೀಕಿಸಿದ್ದಾರೆ.

45
Asianet Image

ಈ ಹಿಂದೆ ಮಾತನಾಡಿದ್ದ ಮೆಹಬೂಬಾ ಮುಫ್ತಿ, ಮಿಲಿಟರಿ ಕ್ರಮ, ಉದ್ವಿಗ್ನತೆ ಹೆಚ್ಚಳದಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ. ಮಾತುಕತೆ ನಡೆಸಿ ಎಂದಿದ್ದರು. ಮಿಲಿಟರಿ ಕಾರ್ಯಾಚರಣೆ ನಡೆದಾಗಲೆಲ್ಲಾ ನಾವು ನೋಡಿದ್ದೇವೆ. ಇದು ಯಾವುದೇ ಪರಿಹಾರವನ್ನು ತರುವುದಿಲ್ಲ. ಶಾಂತಿಯನ್ನು ಸ್ಥಾಪಿಸಲು ನೆರವಾಗುವುದಿಲ್ಲ. ಪಾಕಿಸ್ತಾನದ ಪರಿಸ್ಥಿತಿ ಚೆನ್ನಾಗಿಲ್ಲ. ಆದ್ದರಿಂದ ಎರಡೂ ದೇಶಗಳು ರಾಜಕೀಯ ಹಸ್ತಕ್ಷೇಪಕ್ಕೆ ಪ್ರಯತ್ನಿಸಬೇಕು. ಮಿಲಿಟರಿ ಹಸ್ತಕ್ಷೇಪದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದಿದ್ದರು. 

55
Asianet Image

ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ, ಪಾಕಿಸ್ತಾನದ ದಾಳಿಯಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ, ಅವರು ಬಂದೂಕುಗಳನ್ನು ಮೌನಗೊಳಿಸಬೇಕು. ಪರಿಸ್ಥಿತಿ ಸಾಮಾನ್ಯಗೊಳಿಸಲು ಸಹಾಯ ಮಾಡಬೇಕು ಎಂದಿದ್ದರು. ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ( ಎಐಎಂಪಿಎಲ್‌ಬಿ) ಕೂಡ ಈ ಬಗ್ಗೆ ಆಗ್ರಹಿಸಿದ್ದು‘ ಉಭಯ ದೇಶಗಳು ದ್ವಿಪಕ್ಷೀಯ ಸಂವಾದ, ಮತ್ತು ಚರ್ಚೆಗಳ ಮೂಲಕ ಸಮಸ್ಯೆ ಬಗೆ ಹರಿಸಿಕೊಳ್ಳಬೇಕು. ಯುದ್ಧವೂ ಯಾವುದೇ ಸಮಸ್ಯೆಗೆ ಪರಿಹಾರವಲ್ಲ’ ಎಂದಿದ್ದಾರೆ.

Mahmad Rafik
About the Author
Mahmad Rafik
ಮಹ್ಮದ್ ರಫಿಕ್ ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ. Read More...
ಮೆಹಬೂಬಾ ಮುಫ್ತಿ
ಜಮ್ಮು ಮತ್ತು ಕಾಶ್ಮೀರ
ಸಿಂಧೂ ನದಿ ಒಪ್ಪಂದ
ಪಾಕಿಸ್ತಾನ
ಓಮರ್ ಅಬ್ದುಲ್ಲಾ
ಆಪರೇಷನ್ ಸಿಂಧೂರ
ಭಾರತ ಸುದ್ದಿ
 
Recommended Stories
Top Stories