ಮಾಜಿ ಶಾಸಕ ಬಸವರಾಜ್ ದಡೇಸಗೂರು, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗನ್ ಮ್ಯಾನ್ ವಿಚಾರವಾಗಿ ಶೋಕಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕೊಪ್ಪಳದಲ್ಲಿ ಮಾಜಿ ಶಾಸಕ ಬಸವರಾಜ್ ದಡೇಸಗೂರು ಮತ್ತು ಸಚಿವ ಶಿವರಾಜ್ ತಂಗಡಗಿ ನಡುವೆ ಗನ್ಮ್ಯಾನ್ ವಿವಾದ ಭುಗಿಲೆದ್ದಿದೆ. ದಡೇಸಗೂರು ಅವರಿಗೆ ರಕ್ಷಣೆ ನೀಡುತ್ತಿಲ್ಲ ಎಂಬ ಆರೋಪಕ್ಕೆ ತಂಗಡಗಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಜ್ಞಾನ ಕಡಿಮೆ ಇದ್ದರೆ ಖಾಸಗಿ ಗನ್ಮ್ಯಾನ್ ಇಟ್ಟುಕೊಳ್ಳಿ ಎಂದಿದ್ದಾರೆ.
ಹಿರೇಹಳ್ಳ ಜಲಾಶಯ ಯೋಜನೆ ಮತ್ತು ಪುನರ್ವಸತಿ ಗ್ರಾಮಗಳ ನಿರ್ಮಾಣದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ನಿವೃತ್ತ ಅಧಿಕಾರಿಗಳು ಸೇರಿದಂತೆ 16 ಅಧಿಕಾರಿಗಳ ವಿರುದ್ಧ ಕೊಪ್ಪಳ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿವಾಹಿತಳನ್ನು ಪ್ರೀತಿಸಿ ಮದುವೆಯಾಗಿದ್ದಾನೆ ಎನ್ನುವ ಕಾರಣಕ್ಕಾಗಿ 8 ವರ್ಷಗಳಿಂದ ಪರ್ವತ ಮಲ್ಲಯ್ಯ ಸಮಾಜದ ಕುಟುಂಬವೊಂದನ್ನು ಅದೇ ಸಮಾಜ ಬಹಿಷ್ಕರಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಗಂಗಾವತಿ ತಾಲೂಕಿನ ಹಣವಾಳ ಗ್ರಾಮದಲ್ಲಿ ನಡೆದ ಯುವಕನ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೊಬೈಲ್ ನೆಟ್ವರ್ಕ್ ಮತ್ತು ಕಾಲ್ ರೆಕಾರ್ಡ್ಗಳ ಸಹಾಯದಿಂದ ಆರೋಪಿಗಳನ್ನು ಬಂಧಿಸಲಾಗಿದೆ.
ದಲಿತರ ಕ್ಷೌರ ಮಾಡಿದರೆ ಸರ್ವಣೀಯರು ಬರುವುದಿಲ್ಲ ಎನ್ನುವ ಕಾರಣದಿಂದ ತಾಲೂಕಿನ ಮುದ್ದಾಬಳ್ಳಿಯಲ್ಲಿ ಮುಚ್ಚಲಾಗಿದ್ದ ಕಟಿಂಗ್ ಸಲೂನ್ (ಕ್ಷೌರದಂಗಡಿ) ಅನ್ನು ಬುಧವಾರ ಜಿಲ್ಲಾಡಳಿತದ ಮಧ್ಯಸ್ಥಿಕೆಯಲ್ಲಿ ತೆರೆಯಲಾಯಿತು.
ದಲಿತರಿಗೆ ಕಟಿಂಗ್ ಮಾಡಿದರೆ ಸರ್ವಣೀಯರು ಬರುವುದಿಲ್ಲವೆಂದು ಕ್ಷೌರಿಕರು ಎರಡು ತಿಂಗಳಿಂದ ಕಟಿಂಗ್ ಶಾಪ್ಗಳನ್ನು ಬಂದ್ ಮಾಡಿ ಕೊಪ್ಪಳಕ್ಕೆ ಹೋಗಿ ಕಟಿಂಗ್ ಮಾಡುತ್ತಿರುವ ಘಟನೆ ತಾಲೂಕಿನ ಮುದ್ದಾಬಳಿ ಗ್ರಾಮದಲ್ಲಿ ನಡೆದಿದೆ.
: ಅಯೋಧ್ಯೆಯ ಶ್ರೀರಾಮಮಂದಿರದ ಅಭಿವೃದ್ಧಿಯಂತೆ ಹನುಮನ ಜನ್ಮ ಸ್ಥಳವಾದ ಅಂಜನಾದ್ರಿ ಅಭಿವೃದ್ಧಿಗೆ ಒತ್ತು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ವಿಶ್ವಪ್ರಸನ್ನ ತೀರ್ಥರು ಹೇಳಿದರು.
ಹಂಪಿ ಎಕ್ಸ್ಪ್ರೆಸ್ನಲ್ಲಿ ಬರುವಾಗ ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಪ್ರಯಾಣಿಕ ಮಹ್ಮದ್ ಭಾಷಾ ಅತ್ತಾರ ಮೇಲೆ ಟಿಟಿ ಹಲ್ಲೆ ಮಾಡಿರುವುದನ್ನು ಖಂಡಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.