Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Mysuru

ಮೈಸೂರು ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir

ಇನ್ನಷ್ಟು ಸುದ್ದಿ

ಕೃಷಿ ಮಾಡಿಕೊಂಡೇ ₹15 ಲಕ್ಷ ಗಳಿಸ್ತಾರೆ ಈ ದಂಪತಿ!  ನೀವು ರೈತರೇ? ಆಸಕ್ತಿ ಇದ್ದರೆ ಸಂಪರ್ಕಿಸಿ ಇಲ್ಲಿದೆ ನಂಬರ್!
ಕೃಷಿ ಮಾಡಿಕೊಂಡೇ ₹15 ಲಕ್ಷ ಗಳಿಸ್ತಾರೆ ಈ ದಂಪತಿ! ನೀವು ರೈತರೇ? ಆಸಕ್ತಿ ಇದ್ದರೆ ಸಂಪರ್ಕಿಸಿ ಇಲ್ಲಿದೆ ನಂಬರ್!

ನಂಜನಗೂಡು ತಾ. ಹಾಡ್ಯದ ಕೆ.ಎಂ. ಭವ್ಯಾ ಹಾಗೂ ಎಚ್‌.ಬಿ. ಜಗದೀಶ್‌ ದಂಪತಿ ಸಮಗ್ರ ಕೃಷಿ ಪದ್ಧತಿ ಅನುಸರಿಸುತ್ತಾ, ಸಮೃದ್ಧ ಬೆಳೆ ಬೆಳೆದು ವಾರ್ಷಿಕ 15 ಲಕ್ಷ ರು. ನಿವ್ವಳ ಲಾಭ ಗಳಿಸುತ್ತಿದ್ದಾರೆ. ಈ ದಂಪತಿಗೆ 2.23 ಎಕರೆ ಸ್ವಂತ ಜಮೀನಿದೆ. ತಾತ- ಮುತ್ತಾತರ ಕಾಲದಿಂದಲೂ ಕೃಷಿಯನ್ನೇ ಅವಲಂಬಿಸಿಕೊಂಡು ಬಂದಿದ್ದಾರೆ. ಬೇರೆಯವರ ಸುಮಾರು ಹತ್ತು ಜಮೀನನ್ನು ಗುತ್ತಿಗೆ ಪಡೆದು ಕೂಡ ಕೃಷಿ ಮಾಡುತ್ತಿದ್ದಾರೆ. ತುಂತುರು ನೀರಾವರಿ ಪದ್ಧತಿ, ಸಾವಯವ ಕೃಷಿ ಪದ್ಧತಿ ಅನುಸರಿಸುತ್ತಾರೆ. ಕೃಷಿ ಯಂತ್ರೋಪಕರಣಗಳನ್ನು ಬಳಕೆ ಮಾಡುತ್ತಾರೆ. 

ಅಮೆರಿಕದಲ್ಲಿ ಹೆಂಡತಿ, ಮಗನಿಗೆ ಗುಂಡಿಟ್ಟು ತಾನೂ ಆತ್ಮಹತ್ಯೆ ಮಾಡಿಕೊಂಡ ಮೈಸೂರಿನ ಟೆಕ್‌ ಕಂಪನಿ ಸಿಇಒ!
ಅಮೆರಿಕದಲ್ಲಿ ಹೆಂಡತಿ, ಮಗನಿಗೆ ಗುಂಡಿಟ್ಟು ತಾನೂ ಆತ್ಮಹತ್ಯೆ ಮಾಡಿಕೊಂಡ ಮೈಸೂರಿನ ಟೆಕ್‌ ಕಂಪನಿ ಸಿಇಒ!

ಅಮೆರಿಕದಲ್ಲಿ ಮೈಸೂರು ಮೂಲದ ಉದ್ಯಮಿ ಹರ್ಷವರ್ಧನ್ ಪತ್ನಿ, ಮಗನಿಗೆ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಳು ವರ್ಷದ ಕಿರಿಯ ಮಗ ಬದುಕುಳಿದಿದ್ದಾನೆ. ವಾಷಿಂಗ್ಟನ್‌ನ ನ್ಯೂಕ್ಯಾಸಲ್‌ನಲ್ಲಿ ಈ ಘಟನೆ ನಡೆದಿದೆ. ಹರ್ಷ 'ಹೋಲೋವರ್ಲ್ಡ್' ಕಂಪನಿಯ ಸಿಇಒ ಆಗಿದ್ದರು. ತನಿಖೆ ಮುಂದುವರೆದಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಹೊಸ ಎಂಟ್ರಿ-ಎಕ್ಸಿಟ್; ಸಂಸದ ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಹೊಸ ಎಂಟ್ರಿ-ಎಕ್ಸಿಟ್; ಸಂಸದ ಡಾ.ಸಿ.ಎನ್. ಮಂಜುನಾಥ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಗೆ ಚನ್ನಪಟ್ಟಣ ಸಂಪರ್ಕಕ್ಕೆ ಕಣ್ವ ಜಂಕ್ಷನ್ ಬಳಿ ಹೊಸ ಪ್ರವೇಶ ಮತ್ತು ನಿರ್ಗಮನ ನಿರ್ಮಾಣವಾಗಲಿದೆ. ರಾಂಪುರ ಬದಲಿಗೆ ಕಣ್ವ ಜಂಕ್ಷನ್ ಸೂಕ್ತ ಎಂದು ಸಂಸದ ಮಂಜುನಾಥ್, ಶಾಸಕ ಯೋಗೇಶ್ವರ್ ಮತ್ತು ಅಧಿಕಾರಿಗಳು ಸ್ಥಳ ಪರಿಶೀಲಿಸಿ ತೀರ್ಮಾನಿಸಿದ್ದಾರೆ. ಇದು ಪ್ರವಾಸಿ ತಾಣಗಳಿಗೆ ಅನುಕೂಲಕರವಾಗಲಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಈ ಯೋಜನೆಗೆ ಸಮ್ಮತಿಸಿದ್ದಾರೆ.

ಆರ್‌ಎಸ್‌ಎಸ್‌, ಜೆಡಿಎಸ್ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಆರ್‌ಎಸ್‌ಎಸ್‌, ಜೆಡಿಎಸ್ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಈಗ ಏನ್ಮಾಡಿದರೂ 26 ಜೀವ ವಾಪಸ್ ತರಲಾದೀತೆ?: ಸಿದ್ದರಾಮಯ್ಯ
ಈಗ ಏನ್ಮಾಡಿದರೂ 26 ಜೀವ ವಾಪಸ್ ತರಲಾದೀತೆ?: ಸಿದ್ದರಾಮಯ್ಯ

ರಾಜ್ಯದಲ್ಲಿರುವ ಪಾಕಿಸ್ತಾನದ ಪ್ರಜೆಗಳನ್ನು ವಾಪಸ್ ಕಳುಹಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ನೀಡಿರುವ ಸೂಚನೆಯನ್ನು ನಾವು ಪಾಲಿಸುತ್ತೇವೆ. 

ಪಾಕಿಸ್ತಾನದ ಜೊತೆ ಯುದ್ಧ ಬೇಡ, ನಾನು ಯುದ್ಧದ ಪರವಿಲ್ಲ ಎಂದ ಸಿಎಂ ಸಿದ್ಧರಾಮಯ್ಯ!
ಪಾಕಿಸ್ತಾನದ ಜೊತೆ ಯುದ್ಧ ಬೇಡ, ನಾನು ಯುದ್ಧದ ಪರವಿಲ್ಲ ಎಂದ ಸಿಎಂ ಸಿದ್ಧರಾಮಯ್ಯ!

ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ಯುದ್ಧ ವಿರೋಧಿಸಿ, ಕಾಶ್ಮೀರದಲ್ಲಿ ಭದ್ರತೆ ಬಲಪಡಿಸಲು ಕೇಂದ್ರಕ್ಕೆ ಒತ್ತಾಯಿಸಿದ್ದಾರೆ. ಕೇಂದ್ರದ ನಿರ್ದೇಶನದಂತೆ ಕರ್ನಾಟಕದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ ಕಳುಹಿಸುವುದಾಗಿಯೂ ತಿಳಿಸಿದ್ದಾರೆ. ಬಿಜೆಪಿ ಇದನ್ನು ಟೀಕಿಸಿ, ಸ್ಥಳೀಯ ಭದ್ರತೆಯತ್ತ ಗಮನ ಹರಿಸುವಂತೆ ಸಲಹೆ ನೀಡಿದೆ.

48 ಗಂಟೆ ಡೆಡ್‌ಲೈನ್‌: ಕರ್ನಾಟಕದಲ್ಲಿರುವ ಪಾಕಿಗಳಿಗೆ ಶುರು ಆತಂಕ, ಎಲ್ಲೆಲ್ಲಿ ವಾಸವಿದ್ದಾರೆ? ಇಲ್ಲಿದೆ ಮಾಹಿತಿ..
48 ಗಂಟೆ ಡೆಡ್‌ಲೈನ್‌: ಕರ್ನಾಟಕದಲ್ಲಿರುವ ಪಾಕಿಗಳಿಗೆ ಶುರು ಆತಂಕ, ಎಲ್ಲೆಲ್ಲಿ ವಾಸವಿದ್ದಾರೆ? ಇಲ್ಲಿದೆ ಮಾಹಿತಿ..

ಪಹಲ್ಗಾಮ್ ನರಮೇಧದ ಹಿನ್ನೆಲೆಯಲ್ಲಿ, ಭಾರತ ಸರ್ಕಾರ ಎಲ್‌ಟಿವಿ ಹೊರತುಪಡಿಸಿ ಪಾಕಿಸ್ತಾನಿ ಪ್ರಜೆಗಳ ಎಲ್ಲಾ ವೀಸಾಗಳನ್ನು ರದ್ದುಗೊಳಿಸಿದೆ. ಪಾಕ್ ಪ್ರಜೆಗಳನ್ನು ಗಡಿಪಾರು ಮಾಡಲು ರಾಜ್ಯಗಳಿಗೆ ಸೂಚಿಸಲಾಗಿದೆ. ಮಂಗಳೂರಿನಲ್ಲಿ ವೀಸಾ ರದ್ದತಿಯಿಂದ ಪಾಕ್ ಮೂಲದ ಇಬ್ಬರು ವಿವಾಹಿತ ಮಹಿಳೆಯರು ಆತಂಕದಲ್ಲಿದ್ದಾರೆ.

 

ಸಿದ್ದರಾಮಯ್ಯ ಕುರ್ಚಿ ಉಳಿವಿಗಾಗಿ ಜಾತಿ ವರದಿ ತಂದಿಲ್ಲ: ಯತೀಂದ್ರ
ಸಿದ್ದರಾಮಯ್ಯ ಕುರ್ಚಿ ಉಳಿವಿಗಾಗಿ ಜಾತಿ ವರದಿ ತಂದಿಲ್ಲ: ಯತೀಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿಗೆ ಯಾವ ಆಪತ್ತೂ ಬಂದಿಲ್ಲ. ಸಿಎಂ ಕುರ್ಚಿ ಸುರಕ್ಷಿತವಾಗಿದೆ ಎಂದು ಹೇಳಿರುವ ವಿಧಾನಪರಿಷತ್‌ ಸದಸ್ಯ ಡಾ। ಯತೀಂದ್ರ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರ ಆರೋಪವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. 

ಸಿಎಂ ಸಚಿವಾಲಯ ಸರ್ಕಾರಿ ಕೆಲಸಕ್ಕೆ ಮೈಸೂರಿನವರಿಗೆ ಮಾತ್ರ ನೌಕರಿ!
ಸಿಎಂ ಸಚಿವಾಲಯ ಸರ್ಕಾರಿ ಕೆಲಸಕ್ಕೆ ಮೈಸೂರಿನವರಿಗೆ ಮಾತ್ರ ನೌಕರಿ!

ಸಿಎಂ ಸಚಿವಾಲಯದ ೩೩ ಗುತ್ತಿಗೆ ನೇಮಕಗಳಲ್ಲಿ ೨೯ ಮಂದಿ ಸಿಎಂ ಸಿದ್ದರಾಮಯ್ಯನವರ ಸ್ವಕ್ಷೇತ್ರ ಮೈಸೂರಿನವರು. ಉಳಿದ ೩೦ ಜಿಲ್ಲೆಗಳಿಂದ ಕೇವಲ ನಾಲ್ವರು ಮಾತ್ರ ಆಯ್ಕೆಯಾಗಿದ್ದಾರೆ. ಸ್ವಜನಪಕ್ಷಪಾತದ ಈ ನಡೆಗೆ ಟೀಕೆ ವ್ಯಕ್ತವಾಗಿದ್ದು, ಸಮಾನತೆಯ ಪರ ಮಾತನಾಡುವ ಸಿದ್ದರಾಮಯ್ಯನವರ ದ್ವಂದ್ವ ನೀತಿಯೆಂದು ಸಾಮಾಜಿಕ ಕಾರ್ಯಕರ್ತರು ಆಕ್ಷೇಪಿಸಿದ್ದಾರೆ.

ರಾಮಲಲ್ಲಾ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್‌ಗೆ ಗೌರವ ಡಾಕ್ಟರೇಟ್!
ರಾಮಲಲ್ಲಾ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್‌ಗೆ ಗೌರವ ಡಾಕ್ಟರೇಟ್!

ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪಿತವಾದ ಶ್ರೀ ರಾಮಲಲ್ಲನ ವಿಗ್ರಹವನ್ನು ಕೆತ್ತಿದ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್‌ ಅವರಿಗೆ ರಾಜಸ್ಥಾನದ ಮಹಾರಾಜ ಗಂಗಾ ಸಿಂಗ್ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಬಾಬು ಕಾಂಕರ್ ಬಾಗಡೆ ಅವರು ಬಿಕಾನೇರ್‌ನಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಅರುಣ್ ಯೋಗಿರಾಜ್‌ ಅವರಿಗೆ ಪ್ರದಾನ ಮಾಡಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 581
  • 582
  • 583
  • next >
Top Stories