ಚನ್ನಪಟ್ಟಣ ತಾಲೂಕಿನ ಎಲೆ ತೋಟದಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದ ಇವರು ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪುತ್ರ ಹೇಮಂತ್ ಕುಮಾರ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ
2024ರ ಜುಲೈನಲ್ಲಿ ಹೆದ್ದಾರಿಯಲ್ಲಿ ಸುಧಾರಿತ ಇಂಟೆಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ (ಐಟಿಎಂಎಸ್) ಅಳವಡಿಸಿದ ನಂತರ ರಸ್ತೆ ಅಪಘಾತಗಳು ನಿಯಂತ್ರಣಕ್ಕೆ ಬಂದಿವೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷದ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆಯಲ್ಲಿ ಇಳಿಮುಖ ಕಂಡುಬಂದಿದೆ.
ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಕೋರಿ ಪೊಲೀಸರು ಅರ್ಜಿ ಸಲ್ಲಿಸಬೇಕಿತ್ತು. ಆದರೆ, ನ್ಯಾಯಾಲಯದ ಕಲಾಪ ಪ್ರಾರಂಭವಾದರೂ ಸರ್ಕಾರಿ ಪರ ವಕೀಲ ಹಾಗೂ ಪೊಲೀಸರು ಕೋರ್ಟ್ ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆ ಪೊಲೀಸರ ನಡೆಗೆ ಸಿಟ್ಟಾದ ನ್ಯಾಯಧೀಶರು, ಕೊಲೆ ಆರೋಪ ಎದುರಿಸುತ್ತಿದ್ದ ಮೂವರನ್ನು ಬಿಟ್ಟು ಕಳಿಸುವಂತೆ ಆದೇಶ ನೀಡಿದ್ದಾರೆ.
ರಾಮನಗರದಲ್ಲಿ ಬಡತನದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತಮ್ಮ ಒಂದು ತಿಂಗಳ ಹಸುಗೂಸನ್ನು 1.5 ಲಕ್ಷ ರೂ.ಗೆ ಮಾರಾಟ ಮಾಡಿದ್ದಾರೆ. ಗಂಡನಿಗೆ ತಿಳಿಯದಂತೆ ಮಗುವನ್ನು ಮಾರಾಟ ಮಾಡಿದ್ದ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಮನಗರ ಪುರ ಪೊಲೀಸ್ ಠಾಣೆಯಲ್ಲಿ ಸದ್ದಾಂ ಪಾಷ ತನ್ನ ಪತ್ನಿ ನಸ್ರೀನ್ ತಾಜ್ , ಅಸ್ಲಾಂ, ತರನಂ ಸುಲ್ತಾನ, ಫಾಹಿಮಾ, ಶಾಜಿಯಾ ಬಾನು ವಿರುದ್ಧ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥಿವ ಶರೀರವು ಹಳೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಾಗಲಿದ್ದು, ಬಿಡದಿ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 9.30 ರಿಂದ ಪ್ರತಿ ಸ್ಥಳದಲ್ಲಿ 15-20 ನಿಮಿಷಗಳ ಕಾಲ ದರ್ಶನಕ್ಕೆ ಅವಕಾಶವಿದೆ.
ರಾಜ್ಯದಲ್ಲಿರುವ ಬೇರೆ ರಾಷ್ಟ್ರೀಯ ಹೆದ್ದಾರಿಗಳಿಗೆ ಹೋಲಿಕೆ ಮಾಡಿದಲ್ಲಿ ಬೆಂಗಳೂರು - ಮೈಸೂರು ನಡುವಿನ ಎಕ್ಸ್ ಪ್ರೆಸ್ ವೇ ಅತ್ಯಂತ ಕಡಿಮೆ ಅವಧಿಯಲ್ಲಿಯೇ ಕಣ್ಣಿಣಿಕೆ - ಶೇಷಗಿರಿಹಳ್ಳಿ ಟೋಲ್ ನಲ್ಲಿ 278.91 ಕೋಟಿ ಹಾಗೂ ಗಣಂಗೂರು ಟೋಲ್ ಪ್ಲಾಜಾದಲ್ಲಿ 159.37 ಕೋಟಿ ರು. ಸೇರಿ ಒಟ್ಟು 438.28 ಕೋಟಿ ರು. ಸಂಗ್ರಹಿಸುವ ಮೂಲಕ ಟೋಲ್ ಸಂಗ್ರಹಣೆಯಲ್ಲಿಯೂ ಸೂಪರ್ಫಾಸ್ಟ್ ಎನಿಸಿಕೊಂಡಿದೆ.
11 ವರ್ಷಗಳಿಂದ ಜೈಲಿನಲ್ಲಿರುವ ಕೊಲೆ ಪ್ರಕರಣದ ಸಜಾ ಕೈದಿಗೆ ಕೃಷಿ ಚಟುವಟಿಕೆಗಳನ್ನು ನೋಡಿಕೊಳ್ಳಲು ಹೈಕೋರ್ಟ್ 90 ದಿನಗಳ ಪೆರೋಲ್ ಮಂಜೂರು ಮಾಡಿದೆ.
ಅಹಿಂದ ಸಮಾವೇಶ ಎಲ್ಲವೂ ಮಾಧ್ಯಮದವರ ಕ್ರಿಯೇಷನ್. ಅಹಿಂದ ಸಮಾವೇಶ ಮಾಡಲು ಹೊರಟಿದ್ದಾರೆ. ಅದರ ಬಗ್ಗೆ ಮಾತಾನಾಡುವಷ್ಟು ನಾನು ದೊಡ್ಡವ ನಲ್ಲ. ಹೈಕಮಾಂಡ್ ಇದೆ ಅದರ ಬಗ್ಗೆ ಚರ್ಚೆ ಮಾಡುತ್ತದೆ. ಮಾಡಲೇಬಾ ರದು ಅಂತಾ ನಾವು ಹೇಳೋಕೆ ಸಾಧ್ಯ ಇಲ್ಲ: ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ
ಆಸ್ಪತ್ರೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆಗೆ ಒಳಪಡಿಸಿ ಇನ್ನಷ್ಟು ವಿಚಾರಗಳು ತನಿಖೆಯಿಂದ ತಿಳಿದು ಬರಬೇಕಿದೆ. ಡಾ.ಚಂದ್ರಮ್ಮ ದಯಾನಂದ ಸಾಗರ್ ಆಸ್ಪತ್ರೆಯ ಆಡಳಿತ ವಿಭಾಗದ ವೈದ್ಯಕೀಯ ಅಧೀಕ್ಷಕ ಡಾ.ಎಸ್. ಮಧು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.