ಲೋಕಸಭೆ ಚುನಾವಣೆ 2024: ಈ ಬಾರಿ ಕೇರಳ, ಗೋವಾದಲ್ಲಿ ಸನ್ನಿಧಿ ಮತದಾನ ಜಾಗೃತಿ
ಮತದಾನ ಜಾಗೃತಿ ಕುರಿತಾಗಿ ಸನ್ನಿಧಿ ಚುನಾವಣಾ ಆಯೋಗಕ್ಕೆ ಪತ್ರವನ್ನು ಬರೆದಿದ್ದು, ಈಕೆಯ ಪ್ರಯತ್ನಕ್ಕೆ ಆಯೋಗವೂ ಶ್ಲಾಘಿಸಿದೆ, ಖುದ್ದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರೂ ಸನ್ನಿಧಿ ಪ್ರಯತ್ನಕ್ಕೆ ಭೇಷ್ ಎಂದಿದ್ದಾರೆ. ರಾಜ್ಯ ಚುನಾವಣಾ ಆಯೋಗದ ಮುಖ್ಯಚುನಾವಣಾಧಿಕಾರಿಗಳಿಗೆ ಬರೆದಿರುವ ಪತ್ರವನ್ನು ಪುರಸ್ಕರಿಸಿರುವ ಆಯೋಗ ಅವರು ಕಳುಹಿಸಿರುವ ಪ್ರಸ್ತಾವನೆಯನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಆಯೋಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಆದೇಶಿಸಿದೆ.