ವಿಜಯಪುರದಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬರು ತನ್ನ ನಾಲ್ವರು ಮಕ್ಕಳನ್ನು ಕಾಲುವೆಗೆ ಬೀಸಾಡಿ, ತಾನೂ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಡಾ.ಅಂಬೇಡ್ಕರ ಕುರಿತು ಬಿಜೆಪಿ ವಿರುದ್ಧ ಕಾಂಗ್ರೆಸ್ ಹೇಳುತ್ತಿರುವ ಸುಳ್ಳು ಆರೋಪದ ವಿಚಾರದಲ್ಲಿ ಸತ್ಯ ಹೊಸಲು ದಾಟೋ ಮುಂಚೆ ಸುಳ್ಳು ಊರೆಲ್ಲ ಸುತ್ತಾಡಿಕೊಂಡು ಬರುತ್ತದೆ ಎಂಬ ಗಾದೆ ಮಾತು ನಿಜವಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ವಿಜಯಪುರ ಜಿಲ್ಲೆಯಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಫ್ಯಾಕ್ಟರಿಯ ಘಟಕ ಸ್ಥಾಪನೆಯಾಗಲಿದ್ದು, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಈ ಯೋಜನೆಯನ್ನು ಘೋಷಿಸಿದ್ದಾರೆ.
ಮಾಧ್ಯಮಗಳಲ್ಲಿ ನೋಡಿ ಅಂಜಿ ಹೋದೆ, ನಡುಗಿ ಹೋದೆ. ಅಖಾಡಕ್ಕಿಳಿದ ಯಡಿಯೂರಪ್ಪ. ಯತ್ನಾಳಗೆ ಭಾರೀ ಹಿನ್ನಡೆ. ವಾಹ್ ರೇ ವಾಹ್ ಮಾಧ್ಯಮಗಳೇ ಎಂದು ಗರಂ ಆದ ಯತ್ನಾಳ
ಇಟ್ಟಂಗಿಹಾಳ ಬಳಿ 10 ಎಕರೆ ಜಮೀನು ನೀಡಲಾಗುವುದು. ಒಂದೆರಡು ದಿನಗಳಲ್ಲಿ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಸಚಿವ ಎಂ.ಬಿ.ಪಾಟೀಲ.
ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರಿಗೆ, ಸಾಬರಿಗೆ ಮುತ್ತು ಕೊಡಿ ಎಂದು ಗೃಹ ಸಚಿವ ಪರಮೇಶ್ವರ್ ವಿರುದ್ಧ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿಸಿದವರು, ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರನ್ನು ಬಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ಖೋಟಾ ನೋಟು ದೇಶದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಬಿಡುತ್ತೆ. ನಕಲಿ ನೋಟುಗಳ ಬಳಕೆಯನ್ನ ತಡೆಗಟ್ಟಲು 2016 ನವೆಂಬರ್ 8ರಂದು ಕೇಂದ್ರ ಸರ್ಕಾರ ಹಳೆಯ 500, 1000 ನೋಟುಗಳನ್ನ ಅಮಾನ್ಯೀಕರಣ ಮಾಡಿತ್ತು. ನೋಟು ರದ್ದತಿ ಬಳಿಕ ನಿಯಂತ್ರಣಕ್ಕೆ ಬಂದಿದ್ದ ಖೋಟಾ ನೋಟು ಜಾಲ ಮತ್ತೆ ಚಿಗುರೊಡೆಯುತ್ತಿದೆ. ದೇಶದ ಮೂಲೆ ಮೂಲೆಗೂ ಫೇಕ್ ಕರೆನ್ಸಿ ಜಾಲ ವಿಸ್ತರಿಸಿಕೊಳ್ಳುತ್ತಿದೆ.
ನಕ್ಸಲ್ ಮುಕ್ತ ಕರ್ನಾಟಕ ಮಾಡಲು ಹೊರಟ ರಾಜ್ಯ ಸರ್ಕಾರದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇಲ್ಲಿ ಯಾರು ಯಾರಿಗೆ ಶರಣಾಗಿರೋದು? ಯಾರು ಶರಣಾಗಿರೋದು ಎಂಬುವುದು ನನ್ನ ಮೂಲಭೂತ ಪ್ರಶ್ನೆಯಾಗಿದೆ ಎಂದು ವ್ಯಂಗ್ಯವಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ
ಒಬ್ಬರ ತಂದೆ ಆಟೋ ಚಾಲಕ, ಇನ್ನೊಬ್ಬರು ಕುರಿಗಾಹಿಯ ಮಗಳು ಹಿಗೆ ವಿವಿಧ ಕ್ಷೇತ್ರದಿಂದ ಬಂದಿದ್ದ ನಾಲ್ವರು ಬಡ ವಿದ್ಯಾರ್ಥಿನಿಯರು ಹತ್ತಾರು ಸಮಸ್ಯೆ ಮಧ್ಯೆ ತಲಾ 3 ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದು ಎಲ್ಲರೂ ಹುಬ್ಬೇರಿಸುವಂತೆ ಮಾಡಿತು.
ಬಾಬು ಅಬ್ಬಾಸರಿ ಚೌದರಿ ಗ್ಯಾರಂಟಿ ಹಣದಲ್ಲಿ ಗ್ರಾಮಸ್ಥರಿಗೆ ಹೋಳಿಗೆ ಊಟ ಹಾಕಿಸಿ ಪ್ರೀತಿಗೆ ಪಾತ್ರರಾಗಿದ್ದಾರೆ. ಗೃಹಲಕ್ಷ್ಮೀ ಯೋಜನೆಯಿಂದ ಪ್ರತಿ ತಿಂಗಳು ಸರ್ಕಾರ ನೀಡುವ ₹ ೨ ಸಾವಿರ ಹಾಗೂ ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಾಗಿ ಸರ್ಕಾರ ನೀಡುತ್ತಿರುವ ಹಣವನ್ನು ಒಟ್ಟುಗೂಡಿಸಿ ಈ ಕೆಲಸ ಮಾಡಿ ಮಾದರಿಯಾಗಿದ್ದಾರೆ.